ಬೆಳ್ಳಾರೆಯಲ್ಲಿ ಪಾಪ್ಯುಲರ್ ಫ್ರಂಟ್ ಡೇ ಕಾರ್ಯಕ್ರಮ
ಬೆಳ್ಳಾರೆ, ಫೆ. 19: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಂಸ್ಥಾಪನಾ ದಿನದ ಅಂಗವಾಗಿ "ದ್ವೇಷ ರಾಜಕೀಯವನ್ನು ಸೋಲಿಸಿ" ಎಂಬ ಘೋಷಣೆ ಯೊಂದಿಗೆ ದೇಶದಾದ್ಯಂತ ನಡೆಯುವ ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಧ್ವಜಾರೋಹಣವನ್ನು ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಅಧ್ಯಕ್ಷರಾದ ಬಶೀರ್ ಬೆಳ್ಳಾರೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಬಲಿಯಾದ ವೀರ ಯೋಧರಿಗೆ ಸಂತಾಪ ಸೂಚಿಸಿ ಮೌನ ಪ್ರಾರ್ಥನೆ ಮಾಡಲಾಯಿತು.
ಪಾಪ್ಯುಲರ್ ಫ್ರಂಟ್ ಡೇ ಯ ಸಂದೇಶ ಭಾಷಣವನ್ನು ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ನಡೆಸಿ ಮುಂದಿನ ಚುನಾವಣೆಯಲ್ಲಿ ದ್ವೇಷ ರಾಜಕೀಯವನ್ನು ಸೋಲಿಸಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ವಲಯ ಉಪಾಧ್ಯಕ್ಷ ಅಶೀರ್ ಎ.ಬಿ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಹಸೈನಾರ್ ಹಾಜಿ , ಸಿ.ಎಂ,ಜೈನುದ್ದೀನ್. ಯು. ಮುಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು. ಬಶೀರ್ ಯು.ಪಿ ಸ್ವಾಗತಿಸಿ, ಶಾಫಿ ಎಂ.ಎ ವಂದಿಸಿದರು.