ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಕುಂದಾಪುರ, ಎ. 25: ಕೆಎಸ್ಸಾರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಸಮೀಪ ರಾಹೆದ್ದಾರಿ 66ರಲ್ಲಿ ಬುಧವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.
ಮೃತ ಬೈಕ್ ಸವಾರನನ್ನು ಕೋಣಿ ನಿವಾಸಿ ಸಂದೀಪ ಪೂಜಾರಿ (27) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಉದ್ಯೋಗಿಯಾಗಿದ್ದ ಸಂದೀಪ್ ರಜೆಯಲ್ಲಿ ಊರಿಗೆ ಬಂದಿದ್ದು, ನಾವುಂದದ ಮಸ್ಕಿಯಲ್ಲಿರುವ ಚಿಕ್ಕಮ್ಮನ ಮನೆಯ ಕಾರ್ಯಕ್ರಮಕ್ಕಾಗಿ ಬುಧವಾರ ಸಂಜೆ ಆಗಮಿಸಿದ್ದರು. ರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತಿದ್ದ ವೇಳೆ, ಮರವಂತೆ ಸಮೀಪದ ಕುಂದಾಪುರದಿಂದ ಬೈಂದೂರಿನತ್ತ ಸಾಗುತಿದ್ದ ಬಸ್ ಡಿಕ್ಕಿ ಹೊಡೆದಿತ್ತು.
ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಂದೀಪ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರೆಂದು ಪ್ರಕರಣ ದಾಖಲಿಸಿಕೊಂಡಿರುವ ಗಂಗೊಳ್ಳಿ ಪೊಲೀಸರು ತಿಳಿಸಿದ್ದಾರೆ.
Next Story