ಮೆಟ್ರೋ ನಿಲ್ದಾಣದ ಮೇಲಿಂದ ಬಿದ್ದ ಯುವಕ
ಬೆಂಗಳೂರು, ಮೇ 14: ಮದ್ಯದ ಅಮಲಿನಲ್ಲಿ ಯುವಕನೋರ್ವ, ನಗರದ ಮೆಟ್ರೋ ನಿಲ್ದಾಣ ಮೇಲಿಂದ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂದೀಪ್ ಎಂಬ ವ್ಯಕ್ತಿ (27) ನಿಲ್ದಾಣದ ಮೇಲಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಯಶವಂತಪುರದಿಂದ ದಾಸರಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದ ಸಂದೀಪ್, ಶೌಚಾಲಯಕ್ಕೆ ಹೋಗಿ ಬರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ.
ಘಟನೆ ಸಂಬಂಧ ಬಾಗಲಗುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಗಾಯಳು ಸಂದೀಪ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
Next Story