ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ: ಸಮಸ್ಯೆಯಲ್ಲಿ ಸಿಲುಕಿದ ಪ್ರಜ್ವಲ್ ರೇವಣ್ಣ
ಹಾಸನ, ಮೇ 15: ಹಾಸನದ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂಬ ದೂರಿನಂತೆ ತನಿಖೆ ನಡೆಸಿದ ಚುನಾವಣಾ ಆಯೋಗವು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗೆ ಸೂಚಿಸಿದೆ.
ನಾಮಪತ್ರ ಸಲ್ಲಿಸುವ ವೇಳೆ ತಪ್ಪು ಮಾಹಿತಿಯನ್ನು ಒದಗಿಸಿದ್ದಾರೆಂದು ಪ್ರಜ್ವಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ವಕೀಲ ದೇವರಾಜಗೌಡ ಅವರು ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿ ಪ್ರಜಾಪ್ರತಿನಿಧಿ ಕಾಯ್ದೆಯಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಚುನಾವಣಾ ಆಯೋಗವು ತನಿಖೆ ನಡೆಸಿ , ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
Next Story