ಡೆಂಗ್ ನಿಯಂತ್ರಣ ಕ್ರಮಗಳನ್ನು ಅನುಸರಿಸಿ: ಡಾ.ಪ್ರಶಾಂತ್ ಭಟ್
ಉಡುಪಿ, ಮೇ 16: ಡೆಂಗ್ ಹಾಗೂ ಚಿಕನ್ಗುನ್ಯಾ ರೋಗಗಳನ್ನು ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮದರ್ ಆಪ್ ಸಾರೋಸ್ ಚರ್ಚ್ ಆವರಣದಲ್ಲಿ ವಿಶ್ವ ಡೆಂಗ್ ನಿಯಂತ್ರಣ ದಿನದ ಪ್ರಯುಕ್ತ ನಡೆದ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡೆಂಗ್ ಮತ್ತು ಚಿಕನ್ಗುನ್ಯಾ ರೋಗಗಳು ಸೊಳ್ಳೆಗಳಿಂದ ಹರಡುತಿದ್ದು, ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು, ನೀರು ನಿಲ್ಲದಂತೆ ನೋಡಿಕೊಳ್ಳುವ ಮೂಲಕ ಸೊಳ್ಳೆಗಳ ಬೆಳವಣಿಗೆಯನ್ನು ನಿಯಂತ್ರಿಸಬಹುದು. ಮನೆಯಲ್ಲಿ ಸೊಳ್ಳೆ ಪರದೆಗಳನ್ನು ಬಳಸುವುದರ ಮೂಲಕ ಸಹ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು ಎಂದು ಡಾ. ಪ್ರಶಾಂತ್ ಭಟ್ ಹೇಳಿದರು.
ಮದರ್ ಆಪ್ ಸಾರೋಸ್ ಚರ್ಚ್ ಧರ್ಮಗುರು ವಂ. ವಿಜಯ ಡಿಸೋಜ ಜಾಥಾಗೆ ಚಾಲನೆ ನೀಡಿ, ಮಾತನಾಡಿ, ಜಿಲ್ಲೆಯನ್ನು ಮಲೇರಿಯ ಮತ್ತು ಡೆಂಗ್ ಮುಕ್ತ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು. ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂ ಪ್ರಕಾಶ್ ಕಟ್ಟೀಮನಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ.ಕೃಷ್ಣಪ್ಪ, ಕೀಟಶಾಸ್ತ್ರಜ್ಞೆ ಮುಕ್ತಾ ಆಚಾರ್ು ಮತ್ತಿತರರು ಉಪಸ್ಥಿತರಿದ್ದರು.
ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂ ಪ್ರಕಾಶ್ ಕಟ್ಟೀಮನಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ.ಕೃಷ್ಣಪ್ಪ, ಕೀಟಶಾಸ್ತ್ರಜ್ಞೆ ಮುಕ್ತಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಜಾಥಾವು ಮದರ್ ಆಪ್ ಸಾರೋಸ್ ಚರ್ಚ್ನಿಂದ, ಬನ್ನಂಜೆ ಮಾರ್ಗ ವಾಗಿ ಸಾಗಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಮುಕ್ತಾಯಗೊಂಡಿತು.