ಕರ್ನಾಟಕದಲ್ಲಿ ಘಟಾನುಘಟಿಗಳಿಗೆ ಹಿನ್ನೆಡೆ
ಹೊಸದಿಲ್ಲಿ, ಮೇ 23: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಸರಳ ಬಹುಮತದತ್ತ ಹೆಜ್ಜೆ ಇರಿಸಿದೆ.
ವಿಪಕ್ಷ ಯುಪಿಎ ಹಾಗೂ ಇತರ ಪಕ್ಷಗಳಿಗೆ ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸುವ ಪ್ರಯತ್ನ ಫಲಕಾರಿಯಾಗಿಲ್ಲ.
ಕರ್ನಾಟಕದ ತುಮಕೂರಿನಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ , ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ, ಕಲಬುರಗಿಯಲ್ಲಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಿನ್ನಡೆ ಅನುಭವಿಸಿದ್ದಾರೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಮೇಲುಗೈ ಸಾಧಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಅಖಿಲೇಶ್ –ಮಾಯಾ ಜೋಡಿಯ ಮೈತ್ರಿ ಫಲ ನೀಡಿಲ್ಲ . ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. 28 ಕ್ಷೇತ್ರಗಳ ಪೈಕಿ 23ರಲ್ಲಿ ಬಿಜೆಪಿ,3ರಲ್ಲಿ ಕಾಂಗ್ರೆಸ್ , 1ರಲ್ಲಿ ಜೆಡಿಎಸ್ ಮತ್ತು 1ರಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದೆ.
Next Story