ಎಚ್.ಡಿ.ಕೋಟೆ: ಸಿಡಿಲು ಬಡಿದು ನಾಲ್ವರು ಅಸ್ವಸ್ಥ
ಮೈಸೂರು,ಮೇ.25: ಸಿಡಿಲು ಬಡಿತಕ್ಕೆ ನಾಲ್ವರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಚಿಕ್ಕಮ್ಮ ಚಿಕ್ಕದೇವಮ್ಮ ಬೆಟ್ಟದಲ್ಲಿ ನಡೆದಿದೆ.
ಅಸ್ವಸ್ಥರಾದವರನ್ನು ಪುಟ್ಟೀರಯ್ಯ(40), ಸ್ವಾಮಿ (36), ರಂಗಯ್ಯ(35), ಶಂಕರ (37) ಎಂದು ಗುರುತಿಸಲಾಗಿದೆ. ಇವರು ನಂಜನಗೂಡು ತಾಲೂಕಿನ ದೇಬೂರು ಗ್ರಾಮದವರಾಗಿದ್ದು, ಇವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಸ್ವಸ್ಥಗೊಂಡವರು ಚಿಕ್ಕದೇವಮ್ಮ ಬೆಟ್ಟಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ವಾಪಸ್ಸು ಬರುವಾಗ ಈ ಘಟನೆ ಸಂಭವಿಸಿದೆ. ಮಳೆ ಬರುತ್ತಿದ್ದಂತೆ ಮರದ ಕೆಳಗೆ ಈ ನಾಲ್ವರು ಆಶ್ರಯ ಪಡೆದಿದ್ದರು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ನಾಲ್ವರು ಅಸ್ವಸ್ಥಗೊಂಡಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story