ಬಜರಂಗ ದಳದ ತಂಟೆಗೆ ಬಂದರೆ ತಲೆ ತೆಗೆಯುತ್ತೇವೆ: ಮಿಥುನ್ ರೈಗೆ ಕೊಲೆ ಬೆದರಿಕೆ
ವೀಡಿಯೋ ವೈರಲ್
ಬಂಟ್ವಾಳ, ಮೇ 26: ಯೂತ್ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ, ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಲಾಗಿದೆ ಎನ್ನಲಾಗಿರುವ ವೀಡಿಯೋಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಬಹುಮತದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ಬಡಕಬೈಲ್ ಜಂಕ್ಷನ್ ನಲ್ಲಿ ಅಂದು ರಾತ್ರಿ ವೀಜಯೋತ್ಸವ ಆಚರಿಸಿದ್ದರು ಎನ್ನಲಾಗಿದೆ. ಈ ವೇಳೆ ಬಡಕಬೈಲ್, ಅಮ್ಮುಂಜೆ ಹಾಗೂ ವಿವಿಧೆಡೆ ಕಡೆಗಳಲ್ಲಿ ಸಾಗಿ ವಿಜಯೋತ್ಸವ ಮಾಡಿದ ಬಿಜೆಪಿ ಕಾರ್ಯಕರ್ತರು, ಮಿಥುನ್ ರೈಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಲಾಗಿದೆ ಹೇಳಲಾಗುತ್ತಿದೆ. ವೈರಲ್ ಆಗುತ್ತಿರುವ ಈ ವೀಡಿಯೋ ಇಲ್ಲಿನ ಬಡಕಬೈಲ್ನಲ್ಲಿ ಚಿತ್ರೀಕರಿಸಿದ್ದೆನ್ನಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವೀಡಿಯೋದಲ್ಲೇನಿದೆ?:
"ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ" ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯಿಂದಲೇ ಕೇಸು ದಾಖಲಿಸಬಹುದಾಗಿದೆ. ಈಗಾಗಲೇ 108 (ಪ್ರಚೋದನಕಾರಿ ಹೇಳಿಕೆ) ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ತನಿಖೆ ಮುಂದುವರಿದಿದೆ.
- ಬಿ.ಎಂ.ಲಕ್ಷ್ಮೀಪ್ರಸಾದ್, ಪೊಲೀಸ್ ವರಿಷ್ಠಾಧಿಕಾರಿ, ದ.ಕ. ಜಿಲ್ಲೆ