ಪುತ್ತೂರು: ಇಲ್ಲಿನ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ದಿ. ಕುಂಞಲಿ ಎಂಬವರ ಪುತ್ರ ಅಬ್ದುಲ್ ಅಝೀಝ್(56) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಟೈಲರ್ ಆಗಿದ್ದ ಮೃತರು ಪುತ್ತೂರಿನಲ್ಲಿ ಬುರ್ಖಾ ಅಂಗಡಿಯನ್ನು ನಡೆಸುತ್ತಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.