ಜೂ.13ರಂದು ಇಶಾರ ಪತ್ರಿಕಾ ನೂತನ ಕಚೇರಿ ಉದ್ಘಾಟನೆ
ಮಂಗಳೂರು, ಜೂ.12: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ಮುಖವಾಣಿ ಇಶಾರ ಪಾಕ್ಷಿಕದ ಸುಸಜ್ಜಿತ ನೂತನ ಕಚೇರಿಯನ್ನು ಮಂಗಳೂರು ಅಡ್ಯಾರ್ ನಲ್ಲಿರುವ ಕೆ.ಎಚ್.ಕೆ. ರೆಸಿಡೆನ್ಸಿಯಲ್ಲಿ ಜೂ.13ರಂದು ಬೆಳಗ್ಗೆ 10 ಗಂಟೆಗೆ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟಿಸಲಿದ್ದು, ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ದುಆ ನೇರವೇರಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸೈಯದ್ ಉಮರ್ ಅಸ್ಸಖಾಫ್ ಅಧ್ಯಕ್ಷತೆ ವಹಿಸುವರು. ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಎಂ ಝೈನಿ ಕಾಮಿಲ್, ಕೆಸಿಎಫ್ ಅಂತಾರಾಷ್ಟ್ರೀಯ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ, ಅಬ್ದುಲ್ ಹಮೀದ್ ಬಜ್ಪೆ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸದಸ್ಯರು, ಜಿಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಇಶಾರ ಮಂಡಳಿ ಸಮಿತಿಯ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.