ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಅಡ್ಡಿ
ಶುಐಬ್ ಅಖ್ತರ್ ಜೋಕ್
ಹೊಸದಿಲ್ಲಿ, ಜೂ.14: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜೂನ್ 16ರಂದು ನಡೆಯಲಿರುವ ವಿಶ್ವಕಪ್ ಪಂದ್ಯಕ್ಕೆ ಮಳೆ ಅಡ್ಡ್ಡಿಪಡಿಸಬಹುದೆಂಬ ಬಗ್ಗೆ ಪಾಕ್ ತಂಡದ ಮಾಜಿ ವೇಗಿ ಶುಐಬ್ ಅಖ್ತರ್ ಜೋಕ್ ಮಾಡಿದ್ದಾರೆ.
ಟಾಸ್ ಬಳಿಕ ಮಳೆಯಿಂದಾಗಿ ಪೆವಿಲಿಯನ್ ಸೇರುವ ಹಾದಿಯಲ್ಲಿ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪಾಕ್ ನಾಯಕ ಸರ್ಫರಾಜ್ ಅಹ್ಮದ್ ಈಜುತ್ತಿರುವ ಕಾಲ್ಪನಿಕ ಚಿತ್ರವನ್ನು ಅಖ್ತರ್ ಟ್ವಿಟರ್ನಲ್ಲಿ ಪೋಸ್ಟ್ ಮಾಡುವ ಮೂಲಕ ಜೋಕ್ ಮಾಡಿದ್ದಾರೆ. ಈಗಾಗಲೇ ವಿಶ್ವಕಪ್ನ 4 ಪಂದ್ಯಗಳು ಮಳೆಯಿಂದಾಗಿ ಕೊಚ್ಚಿ ಹೋಗಿವೆ. ಓಲ್ಡ್ ಟ್ರಾಫರ್ಡ್ ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಬಹುದೆಂದು ಅಖ್ತರ್ ಆತಂಕ ವ್ಯಕ್ತಪಡಿಸಿದ್ದಾರೆ.
Next Story