ಎಂಟು ಅತೃಪ್ತ ಶಾಸಕರು ನಾಳೆ ಬೆಂಗಳೂರಿಗೆ
ಬೆಂಗಳೂರು, ಜು. 9: ಎಂಟು ಮಂದಿ ಶಾಸಕರ ರಾಜೀನಾಮೆ ಕ್ರಮ ಬದ್ಧವಾಗಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಅತೃಪ್ತ ಶಾಸಕರು ನಾಳೆ(ಜು.10) ಬೆಳಗ್ಗೆ 10 ಗಂಟೆಗೆ ಸ್ಪೀಕರ್ ಅವರನ್ನು ಖುದ್ದು ಭೇಟಿ ಮಾಡಿ ತಮ್ಮ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಮುಂಬೈನಲ್ಲಿರುವ ಎಂಟು ಮಂದಿ ಬಂಡಾಯ ಶಾಸಕರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ನಾಳೆ ಬೆಳಗ್ಗೆ ಆಗಮಿಸಲಿದ್ದು, ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ. ಒಂದು ವೇಳೆ ಸ್ಪೀಕರ್ ಸಿಗದೆ ಇದ್ದರೆ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿ, ಕೂಡಲೇ ಅಂಗೀಕರಿಸಬೇಕೆಂದು ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
Next Story