ವಿಧಾನಸೌಧಕ್ಕೆ ಆಗಮಿಸಿದ ಅತೃಪ್ತ ಶಾಸಕರು
ಬೆಂಗಳೂರು, ಜು.11: ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಮುಂಬೈನಿಂದ ಆಗಮಿಸಿದ ಶಾಸಕರು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ವಿಧಾನಸೌಧಕ್ಕೆ ತಲುಪಿದರು.
ಅತೃಪ್ತ ಶಾಸಕರು ಇಂದು ಸಂಜೆ 6 ಗಂಟೆಯ ಒಳಗಾಗಿ ಖುದ್ದಾಗಿ ಸ್ಪೀಕರ್ ಮುಂದೆ ಹಾಜರಾಗುವಂತೆ ನ್ಯಾಯಾಲಯ ಆದೇಶ ನೀಡಿತ್ತು. ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ಸ್ಪೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅತೃಪ್ತ ಶಾಸಕರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ನ್ಯಾಯಾಲಯ ಈ ಆದೇಶ ನೀಡಿತ್ತು.
Next Story