ಓಡೋಡುತ್ತಾ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸಿದ ಅತೃಪ್ತರು
ಬೆಂಗಳೂರು. ಜು.11: ಮುಂಬೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ –ಜೆಡಿಎಸ್ ಪಕ್ಷದ ಅತೃಪ್ತ ಶಾಸಕರು ಇಂದು ಸಂಜೆ ಓಡೋಡುತ್ತಾ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ 6 ಗಂಟೆಯ ಮೊದಲು ಸ್ಪೀಕರನ್ನು ಭೇಟಿಯಾಗಬೇಕಿತ್ತು. ಆದರೆ ಅವರು ತಲುಪುವಾಗ ನಿಗದಿತ ಸಮಯಕ್ಕಿಂತ 3ನಿಮಿಷ ತಡವಾಗಿತ್ತು.
ವಿಮಾನ ನಿಲ್ದಾಣದಿಂದ ಬಸ್ ನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅತೃಪ್ತ ಶಾಸಕರು ಸ್ಪೀಕರ್ ಕಚೇರಿಗೆ ಆಗಮಿಸಿದ್ದರು.
Next Story