ರೋಷನ್ ಬೇಗ್ ಮನವೊಲಿಕೆಗೆ ನದೀಮ್ ಜಾವೇದ್ ಆಗಮನ
ಬೆಂಗಳೂರು, ಜು.17: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಷನ್ಬೇಗ್ರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನದೀಮ್ ಜಾವೇದ್ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ಗುರುವಾರ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುತ್ತಿರುವುದರಿಂದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಮಾಡಲು ಕಾಂಗ್ರೆಸ್ನಿಂದ ಕೊನೆಯ ಹಂತದ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೋಷನ್ ಬೇಗ್ರನ್ನು ಮನವೊಲಿಸಲು ಎಐಸಿಸಿ ನದೀಮ್ ಜಾವೇದ್ ಆಗಮಿಸಿದ್ದಾರೆ ಎನ್ನಲಾಗಿದೆ.
Next Story