ಅಸೈಗೋಳಿ: ಪಿಡಿಒ, ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ: ಫಾಸ್ಟ್ ಫುಡ್ ಅಂಗಡಿ ಮಾಲಕಿ ವಿರುದ್ಧವೂ ಕ್ರಮ
ಕೊಣಾಜೆ: ತ್ಯಾಜ್ಯ ವಿಲೇವಾರಿಯ ಬಗ್ಗೆ ಮಾಹಿತಿ ಕೇಳಲು ತೆರಳಿದ್ದ ಕೊಣಾಜೆ ಗ್ರಾಮ ಪಂ. ಅಭಿವೃದ್ಧಿ ಅಧಿಕಾರಿ ಹಾಗೂ ಪಂ. ಸದಸ್ಯನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಅಸೈಗೋಳಿಯ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ಗೀತಾ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಅಸೈಗೋಳಿಯಲ್ಲಿದ್ದ ಫಾಸ್ಟ್ ಫುಡ್ ಅಂಗಡಿಯ ತ್ಯಾಜ್ಯ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಬಂದಿದ್ದ ಕೊಣಾಜೆ ಪಂ. ಅಭಿವೃದ್ಧಿ ಅಧಿಕಾರಿ ಸವಿತಾ ಅವರಿಗೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಗ್ರಾಮ ಪಂ. ಸದಸ್ಯ ರವಿ ಅಸೈಗೋಳಿ ಅವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯತೀಶ್ ಮತ್ತು ಸುರೇಂದ್ರ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಅಂಗಡಿ ಮಾಲಕಿ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಅನಧಿಕೃತ ಅಂಗಡಿ ತೆರವಿಗೆ ನಿರ್ಣಯ : ಫಾಸ್ಟ್ ಫುಡ್ ಅನಧಿಕೃತವಾಗಿದ್ದು, ಅಂಗಡಿ ಮುಚ್ಚಿಸಲು ಪಂಚಾಯಿತಿಯಲ್ಲಿ ಬುಧವಾರ ನಡೆದ ತುರ್ತು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Next Story