ರಾಮಲಿಂಗಾರೆಡ್ಡಿ ನಿರ್ಧಾರ ಆಘಾತ ತಂದಿದೆ: ಎಂಟಿಬಿ ನಾಗರಾಜ್
ಮುಂಬೈ, ಜು.19: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ನಿರ್ಧಾರದಿಂದ ನಮಗೆ ಆಘಾತ ತಂದಿದೆ ಎಂದು ಕಾಂಗ್ರೆಸ್ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶಾಸಕರ ಸಭೆ ನಡೆದಿತ್ತು. ಕಾಂಗ್ರೆಸ್ನಲ್ಲಿ ಹಿರಿಯರನ್ನು ಕಡೆಗಣಿಸುತ್ತಿರುವುದರಿಂದ ನಾವೆಲ್ಲರೂ ರಾಜೀನಾಮೆ ನೀಡಲು ಒಟ್ಟಾಗಿ ನಿರ್ಧರಿಸಿದ್ದೆವು. ಆದರೆ, ರಾಮಲಿಂಗಾರೆಡ್ಡಿ ತಮ್ಮ ನಿಲುವಿನಿಂದ ಹಿಂದೆ ಸರಿದಿರುವುದು ಅಚ್ಚರಿ ಮೂಡಿಸಿದೆ ಎಂದರು.
ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂಪಡೆದಿರಬಹುದು. ಆದರೆ, ನಾನಾಗಲಿ, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಸೇರಿದಂತೆ ನಾವ್ಯಾರು ರಾಜೀನಾಮೆ ವಾಪಸ್ ಪಡೆಯುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದರು.
Next Story