ವಿಜಯಪುರ ಡಿವೈಎಸ್ಪಿ ಸೇರಿ ಮೂವರನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಎಸಿಬಿ
ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪದಲ್ಲಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಉಪವಿಭಾಗದ ಡಿವೈಎಸ್ಪಿ ಮಹೇಶ್ವರ ಗೌಡ ಪಾಟೀಲ್, ಪೊಲೀಸ್ ಪೇದೆ ಮಲ್ಲಿಕಾರ್ಜುನ ಪೂಜಾರಿ ಸೇರಿ ಮೂವರನ್ನು ಮಹಾರಾಷ್ಟ್ರ ಎಸಿಬಿ ವಶಕ್ಕೆ ಪಡೆದುಕೊಂಡಿದೆ.
ರೇಷ್ಮಾ ಕೊಲೆ ಆರೋಪಿಗಳಿಂದ ಲಂಚ ಪಡೆಯುವಾಗ ಮಹಾರಾಷ್ಟ್ರ ಎಸಿಬಿ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story