ಬೆಂಗಳೂರು: ಕೊಳ್ಳೆಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಹಾಗೂ ಮಾಜಿ ಸಚಿವ ಎನ್.ಮಹೇಶ್ ನೂತನ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಎಸ್. ಸುರೇಶ್ ಕುಮಾರ್, ಕೆ.ಎಸ್. ಈಶ್ವರಪ್ಪ, ಬಸವರಾಜ್ ಬೊಮ್ಮಾಯಿ, ಎಚ್.ನಾಗೇಶ್ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ನೂತನ ಸಚಿವರಿಗೆ ಅವರು ಹೂಗುಚ್ಛ ನೀಡಿ, ಶಾಲು ಮತ್ತು ಮೈಸೂರು ಪೇಟ ತೊಡಿಸಿ ಅಭಿನಂದಿಸಿದರು.