ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಇಮ್ತಿಯಾಝ್ ಉಡುಪಿ ಆಯ್ಕೆ
ಮಂಗಳೂರು: ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಇಮ್ತಿಯಾಝ್ ಉಡುಪಿ ಆಯ್ಕೆಯಾಗಿದ್ದಾರೆ.
ಕಳೆದ ಮೂರು ವರ್ಷಗಳಿಂದ ಸಕ್ರಿಯವಾಗಿ ವಧು ವರರ ಸಂಪರ್ಕ ಕಲ್ಪಿಸುವ ವೇದಿಕೆಯಾಗಿ ಮಾತ್ರವಲ್ಲದೇ ಸಾಮಾಜಿಕ ಕ್ಷೇತ್ರದಲ್ಲಿ ಜನಪರ ಸೇವಾ ಕಾರ್ಯಕ್ರಮಗಳನ್ನು ಬ್ಯಾರಿ ನಿಖಾಃ ಹೆಲ್ಪ್ ಲೈನ್ ಮಾಡುತ್ತಿದೆ.
ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಮುಂದುವರಿಯುತ್ತಿದ್ದು, ತಂಡದ ಎಲ್ಲಾ ಪದಾಧಿಕಾರಿಗಳ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬ್ಯಾರಿ ನಿಖಾಃ ಹೆಲ್ಪ್ ಲೈನ್ ಮಾಧ್ಯಮ ವಿಭಾಗ ಪ್ರಕಟನೆಯಲ್ಲಿ ತಿಳಿಸಿದೆ.
Next Story