ನಿರಂಜನ್
ವಿಟ್ಲ, ಸೆ. 24: ಭಜರಂಗದಳ ಮಾಜಿ ಸಹ ಸಂಚಾಲಕ, ವಿಟ್ಲಮುಡ್ನೂರು ಗ್ರಾಮದ ಮಾಡತ್ತಾರು ನಿವಾಸಿ ನಿರಂಜನ್ (39) ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಿರಂಜನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story