ನಾರಾಯಣ ಭಟ್ ಲಾಡ
ಕೊಣಾಜೆ: ಕೈರಂಗಳದ ಲಾಡ ನಿವಾಸಿ ನಾರಾಯಣ ಭಟ್ ಲಾಡ(90) ಅವರು ಬುಧವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ನಾಲ್ಕು ಗಂಡು ಮಕ್ಕಳು ಇದ್ದಾರೆ.
ನಾರಾಯಣ ಭಟ್ ಅವರು ಕೈರಂಗಳದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಜನಾಡಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯಲ್ಲಿ 1990ರಿಂದ 2014ರಾಗಿ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಅಲ್ಲದೆ ಮಂಜನಾಡಿ ದೇವಳದ ಜೀರ್ಣೋದ್ದಾರ ಸಮಿತಿಯಲ್ಲಿ ಕೈರಂಗಳ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಲ್ಲಿ ಹಾಗೂ ಇನ್ನಿತರ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
Next Story