ಚಂದನ್ ಶೆಟ್ಟಿಯ ಪ್ರಪೋಸ್ ವಿವಾದದ ಬಗ್ಗೆ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದ್ದು ಹೀಗೆ..
ಬೆಂಗಳೂರು, ಅ. 7: ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಗೌಡ ಪ್ರೇಮ ನಿವೇದನೆ ಮೂಲಕ ಉಂಗುರ ಬದಲಾವಣೆ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ ಏನೂ ಅಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಅವರಿಬ್ಬರೂ ಶಾಪ ಹಾಕುವಂತಹ ಕೆಲಸವನ್ನೇನೂ ಮಾಡಿಲ್ಲ. ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ನಾವೆಲ್ಲ ಪ್ರೀತಿಯಿಂದ ಹರಿಸಿ-ಹಾರೈಸಬೇಕು. ಅವರಿಬ್ಬರ ನಡೆಗೆ ನನ್ನ ಸಂಪೂರ್ಣ ಬೆಂಬಲಿವಿದೆ ಎಂದು ವಾಟಾಳ್ ನಾಗರಾಜ್ ಇಂದಿಲ್ಲಿ ಘೋಷಿಸಿದ್ದಾರೆ.
ಚಂದನ್ ಶೆಟ್ಟಿ ಮತ್ತು ನಿವೇದಿತಗೌಡ ವಿರುದ್ಧ ಕೇಸು ದಾಖಲಿಸುವಂತಹ ಅಪರಾಧವಲ್ಲ. ಅವರ ಮೇಲೆ ಕೇಸು ದಾಖಲಿಸಿದರೆ ಪೊಲೀಸರ ವಿರುದ್ಧ ನಾನೇ ಧರಣಿ ಸತ್ಯಾಗ್ರಹ ನಡೆಸಲಿದ್ದೇನೆ ಎಂದು ವಾಟಾಳ್ ನಾಗರಾಜ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Next Story