ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಿ: ಕೇರಳದ ಶಿಕ್ಷಣ ಸಚಿವರಿಗೆ ಸುರೇಶ್ ಕುಮಾರ್ ಪತ್ರ
ಬೆಂಗಳೂರು, ಅ.13: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಕ ಮಾಡುವಂತೆ ಆಗ್ರಹಿಸಿ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೇರಳದ ಶಿಕ್ಷಣ ಸಚಿವ ಪ್ರೊ.ಸಿ.ರವೀಂದ್ರನಾಥ್ಗೆ ಪತ್ರ ಬರೆದಿದ್ದಾರೆ.
ಗಡಿನಾಡು ಪ್ರದೇಶವಾದ ಕಾಸರಗೋಡಿನ ಕನ್ನಡ ಪ್ರದೇಶಗಳಾದ ಬೇಕಲ, ಉದಮ ಸೇರಿದಂತೆ ಮತ್ತಿತರೆ ಕಡೆಗಳ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ತಿಳಿಯದ ಮಲೆಯಾಳಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಅದು ಅಲ್ಲಿನ ಕನ್ನಡಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬರುವ ಶಿಕ್ಷಕರನ್ನೇ ನೇಮಕ ಮಾಡಬೇಕು ಎಂದು ಶಿಕ್ಷಣ ಸಚಿವ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.
Next Story