ಸಿಎಂ ನೆರೆ ಪರಿಹಾರ ನಿಧಿಗೆ ಸ್ಟೇಟ್ ಬ್ಯಾಂಕ್ನಿಂದ 1 ಕೋಟಿ ರೂ. ದೇಣಿಗೆ
ಬೆಂಗಳೂರು, ಅ.19: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಭಾರತೀಯ ಸ್ಟೇಟ್ ಬ್ಯಾಂಕ್ 1 ಕೋಟಿ ರೂ. ಗಳ ದೇಣಿಗೆಯನ್ನು ಸಲ್ಲಿಸಿದೆ.
ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಗುಪ್ತಾ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ದೇಣಿಗೆಯ ಚೆಕ್ಅನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಅಭಿಜಿತ್ ಮುಜೂಂದಾರ್ ಹಾಗೂ ಜನರಲ್ ಮ್ಯಾನೇಜರ್ ಎಂ.ಡಿ.ವಿನ್ಸೆಂಟ್ ಉಪಸ್ಥಿತರಿದ್ದರು.
Next Story