ಹುಬ್ಬಳ್ಳಿಯಲ್ಲಿ ಸ್ಫೋಟ: ಮಂಗಳೂರಿನಲ್ಲಿ ಕಟ್ಟೆಚ್ಚರ ಬರೀ ವದಂತಿ
ಪೊಲೀಸ್ ಆಯುಕ್ತರ ಸ್ಪಷ್ಟನೆ
ಮಂಗಳೂರು, ಅ.21: ‘ಹುಬ್ಬಳ್ಳಿ- ಧಾರವಾಡದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ’ ಎನ್ನುವ ವದಂತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಷಯ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಸ್ಪಷ್ಟಪಡಿಸಿದ್ದಾರೆ.
‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಮಂಗಳೂರಿನ ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಗಳಲ್ಲಿ, ಬಸ್ ನಿಲ್ದಾಣ ಸೇರಿದಂತೆ ಜನ ದಟ್ಟಣೆ ಇರುವ ಸ್ಥಳಗಳಲ್ಲಿ ಯಾವುದೇ ವಿಶೇಷ ಕಾರ್ಯಾಚರಣೆ ನಡೆಸುತ್ತಿಲ್ಲ. ಮೊದಲಿನಿಂದ ಇರುವ ತಪಾಸಣೆಯೇ ಮುಂದುವರಿಯಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಅಂತಹ ಉದ್ವಿಗ್ನ ಪರಿಸ್ಥಿತಿ ಇಲ್ಲ. ಸ್ಥಳೀಯರು ಯಾವುದೇ ಆತಂಕ್ಕೊಳಗಾಗುವ ಅಗತ್ಯವಿಲ್ಲ. ಕಟ್ಟೆಚ್ಚರ ಕೈಗೊಳ್ಳುವ ಬಗ್ಗೆ ಮೇಲಧಿಕಾರಿಗಳಿಂದ ಯಾವುದೇ ಆದೇಶ ಬಂದಿಲ್ಲ ಎಂದೂ ಅವರು ತಿಳಿಸಿದರು.
Next Story