ಸ್ಮಾಟ್ ಬಸ್ ನಿಲ್ದಾಣಕ್ಕೆ ಸಂಸದ ತೇಜಸ್ವಿ ಸೂರ್ಯ ಚಾಲನೆ
ಬೆಂಗಳೂರು, ಅ. 21: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಪೂರ್ಣ ಹವಾನಿಯಂತ್ರಿತ, ಉಚಿತ ವೈಫೈ, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿ ಆಧುನಿಕ ವ್ಯವಸ್ಥೆಯುಳ್ಳ ಸ್ಮಾಟ್ ಬಸ್ ನಿಲ್ದಾಣಕ್ಕೆ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದರು.
ಸೋಮವಾರ ನಗರದ ಮಡಿವಾಳ ಕೆನರಾ ಬ್ಯಾಂಕ್ ಎದುರಿನಲ್ಲಿ ರೈಲ್ ಯಾತ್ರಿ ಇಂಟರ್ ಸಿಟಿ ಅತ್ಯಾಧುನಿಕ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿ ಮಾತನಾಡಿದ ತೇಜಸ್ವಿ ಸೂರ್ಯ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಸ್ಮಾಟ್ಬಸ್ ನಿಲ್ದಾಣ ಜನರಿಗೆ ಹೊಸ ಅನುಭವ ನೀಡಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Next Story