ಪ್ರೇಮ ಪ್ರಕರಣ ರದ್ದು ಕೋರಿ ಎಸ್.ಎ.ರಾಮದಾಸ್ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು, ನ.12: ಮಾಜಿ ಸಚಿವ ಎಸ್.ಎ.ರಾಮದಾಸ್ ತಮ್ಮ ವಿರುದ್ಧ ದಾಖಲಾಗಿರುವ ಪ್ರೇಮ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪ್ರೇಮಕುಮಾರಿ ಕೇಸ್ನಲ್ಲಿ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ, ರಾಮದಾಸ್ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು. ಮತ್ತೊಂದೆಡೆ ರಾಮದಾಸ್ಗೆ ಬ್ಲ್ಯಾಕ್ ಮೇಲ್ ಆರೋಪದ ಮೇಲೆ ಪ್ರೇಮಾಕುಮಾರಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡುವಂತೆ ಸಿಐಡಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತ್ತು. ಇದೀಗ ರಾಮದಾಸ್ ತಮ್ಮ ವಿರುದ್ಧ ಮೈಸೂರಿನ ಸ್ವರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಏನಿದು ಪ್ರಕರಣ: ಮಾಜಿ ಸಚಿವ ರಾಮದಾಸ್ 5 ವರ್ಷಗಳ ಹಿಂದೆಯೇ ನನಗೆ ಪರಿಚಯವಾಗಿದ್ದರು. ನನ್ನನ್ನು ಪ್ರೀತಿಸುವ ನಾಟಕವಾಡಿ ದೈಹಿಕವಾಗಿ ಬಳಸಿಕೊಂಡು, ಮದುವೆಯಾಗುವುದಾಗಿ ನಂಬಿಸಿ ಹಣೆಗೆ ಸಿಂಧೂರವಿಟ್ಟಿದ್ದರು. ಕೊನೆಗೆ ಮದುವೆ ವಿಚಾರ ಪ್ರಸ್ತಾಪಿಸಿದ್ದಕ್ಕೆ ಕೊಲೆ ಬೆದರಿಕೆವೊಡ್ಡಿದ್ದರು ಎಂದು ಆರೊಪಿಸಿ ಪ್ರೇಮಕುಮಾರಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.