ಭವಾನಿ ಶಂಕರ್
ಪುತ್ತೂರು: ಕಲಾಪೋಷಕ ಪುತ್ತೂರಿನ ದರ್ಬೆ ಮೂಕಾಂಬಿಕಾ ಕಲ್ಚರಲ್ ಅಕಾಡಮಿಯ ಸಂಚಾಲಕರಾದ ಡಿ. ಭವಾನಿ ಶಂಕರ್ ಅವರು ಬುಧವಾರ ನಿಧನರಾದರು.
ಮೂಕಾಂಬಿಕಾ ಕಲ್ಚರಲ್ ಅಕಾಡಮಿ ಸ್ಥಾಪಿಸಿ ಕಳೆದ ಹಲವಾರು ವರ್ಷಗಳಿಂದ ಸಾಂಸ್ಕೃತಿಕ ಸೇವೆಯನ್ನು ಮಾಡುತ್ತಿದ್ದ ಭವಾನಿ ಶಂಕರ್ ಅವರು ಪುತ್ತೂರಿನಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಗ್ಗೆ ಚಿಕಿತ್ಸೆಗೆಂದು ಹೋಗುತ್ತಿದ್ದ ವೇಳೆಯಲ್ಲಿ ದಾರಿ ಮದ್ಯೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ. ಪುತ್ರರಾದ ಭರತನಾಟ್ಯ ವಿದ್ವಾನ್ ದೀಪಕ್ ಕುಮಾರ್ ಮತ್ತು ಗಿರೀಶ್ ಕುಮಾರ್ ಅವರನ್ನು ಅಗಲಿದ್ದಾರೆ.
Next Story