ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿಗೆ ಸಂಸದೆ ಪ್ರಜ್ಞಾ ಠಾಕೂರ್ ನೇಮಕ
ಹೊಸದಿಲ್ಲಿ, ನ.21: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಭೋಪಾಲದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ನೇಮಕಗೊಳಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ 21 ಸದಸ್ಯರ ಸಲಹಾ ಸಮಿತಿಯಲ್ಲಿ ಪ್ರಜ್ಞಾ ಕೂಡ ಒಬ್ಬರಾಗಲಿದ್ದಾರೆ.
ತನ್ನ ವಿವಾದಾತ್ಮಕ ಹೇಳಿಕೆಗಳಿಂದಾಗಿ ಸದಾ ಸುದ್ದಿಯಲ್ಲಿರುವ ಪ್ರಜ್ಞಾ ಠಾಕೂರ್ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದರು. ಆಕೆ ತನ್ನ ಈ ಹೇಳಿಕೆಗೆ ಕ್ಷಮೆ ಕೋರಿದ್ದರೂ ಆಕೆಯನ್ನು ಹೃದಯಾಂತರಾಳದಿಂದ ಕ್ಷಮಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಗೋಡ್ಸೆಯನ್ನು ಹೊಗಳಿದ್ದ ಪ್ರಜ್ಞಾಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಬಿಜೆಪಿ ಹೇಳಿತ್ತು. ಆದರೆ ನಂತರ ಆಕೆಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರುವ ಕುರಿತಂತೆ ಸುದ್ದಿಯಿಲ್ಲ.
Next Story