ಮನಪಾ ಚುನಾವಣೆಯ ಹಿನ್ನಲೆ : ದ.ಕ.ಜಿಲ್ಲಾ ಕಾಂಗ್ರೆಸ್ನಿಂದ ಶಿಸ್ತು ಸಮಿತಿ ರಚನೆ
ಮಂಗಳೂರು, ಡಿ.2: ಮಂಗಳೂರು ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೆಲವು ಕೆಲವು ಮಂದಿ ಪಕ್ಷವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ಬಗ್ಗೆ ಸಮಗ್ರ ವರದಿಯೊಂದನ್ನು ರಚಿಸುವ ಸಲುವಾಗಿ ಶಿಸ್ತು ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಲಾಗಿದೆ.
ಅಧ್ಯಕ್ಷರಾಗಿ ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಸಹ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಸದಸ್ಯರಾಗಿ ಡಿಸಿಸಿ ಸಮಿತಿ ಸದಸ್ಯ ದಿನೇಶ್ ಆಳ್ವ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಡಿಸಿಸಿ ಕಾರ್ಯದರ್ಶಿ ಉಷಾ ಅಂಚನ್ ಅವರನ್ನು ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ತಿಳಿಸಿದ್ದಾರೆ.
Next Story