ಉಳ್ಳಾಲ ದರ್ಗಾದ ಆಡಳಿತಾಧಿಕಾರಿ ನೇಮಕ ಆದೇಶಕ್ಕೆ ಸಿಎಂ ಕಚೇರಿ ತಡೆ
ಮಂಗಳೂರು: ಉಳ್ಳಾಲ ಸೈಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ಹಾಜಿ ಇಬ್ರಾಹಿಂ ಗೂನಡ್ಕರನ್ನು ನೇಮಕಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಿಎಂ ಕಚೇರಿ ತಡೆಹಿಡಿದಿದೆ.
ಈ ಬಗ್ಗೆ ‘ವಾರ್ತಾ ಭಾರತಿ’ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್ , “ಮುಂದಿನ ಆದೇಶದವರೆಗೆ ಇಬ್ರಾಹೀಂ ಗೂನಡ್ಕ ಅವರು ಅಧಿಕಾರ ಸ್ವೀಕರಿಸದಂತೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಉಳ್ಳಾಲ ದರ್ಗಾ ಮತ್ತು ಅದರ ಅಧೀನ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ವಿಚಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕ ಉಸ್ತಾದ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಭೇಟಿಯಾಗಿ ಮಾತುಕತೆ ನಡೆಸಿತ್ತು.