ಕಾಸರಗೋಡು : ರಸ್ತೆ ಅಪಘಾತಕ್ಕೆ ಯುವಕ ಬಲಿ
ಕಾಸರಗೋಡು : ಟೆಂಪೋ ವ್ಯಾನ್ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಗರ ಹೊರವಲಯದ ನಾಯಮ್ಮರ ಮೂಲೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಚೆರ್ಕಳದ ಬೇರ್ಕ ನಿವಾಸಿ ಶಮ್ಮಾಸ್ (20) ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಶಮ್ಮಾಸ್ ರನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story