'ಭಾರತ್ ಬಚಾವೋ ಆಂದೋಲನಕ್ಕೆ ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು'
ಉಡುಪಿ, ಡಿ.11: ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ವತಿಯಿಂದ ಹೊಸದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಡಿ.14ರಂದು ನಡೆಯುವ ಭಾರತ್ ಬಚಾವೋ ಆಂದೋಲನದಲ್ಲಿ ಜಿಲ್ಲೆಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಕೇಂದ್ರ ಬಿಜೆಪಿ ಸರಕಾರದ ಆಡಳಿತ ವೈಫಲ್ಯ, ಆರ್ಥಿಕ ನೀತಿ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ನಿರುದ್ಯೋಗ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಈ ಆಂದೋಲನವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story