ನನ್ನ ಮೇಲಿನ ದ್ವೇಷದಿಂದ ಜನರಿಗೆ ಅನ್ಯಾಯ ಮಾಡಬೇಡಿ: ಬಿಎಸ್ವೈಗೆ ಕುಮಾರಸ್ವಾಮಿ ಮನವಿ
ಬೆಂಗಳೂರು, ಡಿ. 12: ‘ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕೆ ರಾಮನಗರವೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಿಎಸ್ವೈಗೆ ಮನವಿ ಮಾಡಿದ್ದಾರೆ.
ಗುರುವಾರ ಟ್ವೀಟ್ ಮಾಡಿರುವ ಅವರು, ‘ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರದ ಅನುದಾನ ತಡೆ ಹಿಡಿದಿರುವುದು ಸಲ್ಲ’ ಎಂದು ಆಕ್ಷೇಪಿಸಿದ್ದಾರೆ.
Next Story