ವಿವಾದ ಸೃಷ್ಟಿಸಿದ ಸರ್ದಾರ್ ಪಟೇಲ್-ಅಮಿತ್ ಶಾ ಜೋಡಿ ಕಲಾಕೃತಿ
ಬೆಂಗಳೂರು, ಜ.18:ದೇಶದ ಮೊದಲ ಉಪ ಪ್ರಧಾನಿ, ಕಾಂಗ್ರೆಸ್ ಹಿರಿಯ ಮುಖಂಡ, ಉಕ್ಕಿನ ಮನುಷ್ಯ ಎಂದೇ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಕೇಂದ್ರದ ಹಾಲಿ ಗೃಹ ಸಚಿವ ಅಮಿತ್ ಶಾ ಅವರ ಹಣೆ ಒಂದೇ ಎಂದು ಬಿಂಬಿತವಾಗುವ ಕಲಾಕೃತಿಯೊಂದರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಎಡೆ ಮಾಡಿದೆ.
ಶನಿವಾರ ನಗರದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಚೇರಿ ಉದ್ಘಾಟನೆ ವೇಳೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಕಲಾಕೃತಿ ನೀಡಿದ್ದಾರೆ. ಈ ಕಲಾಕೃತಿಯನ್ನು ಸ್ವತಃ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಆಕ್ರೋಶ: ಕಾಂಗ್ರೆಸ್ ಕಾರ್ಯಕರ್ತರು, ಈ ಕಲಾಕೃತಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ದಾರ್ ವಲ್ಲಭಭಾಯಿ ಪಟೇಲರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅಲ್ಲದೆ, ಅಮಿತ್ ಶಾ ಅವರ ಸಾಧನೆ ಆದರೂ ಏನು? ಅವರಿಗೂ ಪಟೇಲರಿಗೂ ಬಹಳ ವ್ಯತ್ಯಾಸ ಇದೆ ಎಂದು ಆರೋಪಿಸಿದ್ದಾರೆ. ಈ ಕಲಾಕೃತಿ ಪ್ರದಾನ ವೇಳೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಉಪಸ್ಥಿತರಿದ್ದರು.
Next Story