ಪೊಲೀಸ್ ಪೇದೆ ಮೇಲೆ ಹಲ್ಲೆ: ಆರೋಪ
ಬೆಂಗಳೂರು, ಜ.18: ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಪೇದೆ ಜಗದೀಶ್ ಎಂಬುವರು, ಜ.14ರಂದು ಇಲ್ಲಿನ ಬೋಮ್ಮನಹಳ್ಳಿ ಸಿಗ್ನಲ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ, ರಸ್ತೆ ಪಕ್ಕ ನಿಂತಿದ್ದ ಆಟೊ ರೀಕ್ಷಾಗಳನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ, ಅಪರಿಚಿತ ವ್ಯಕ್ತಿಗಳು ಕಲ್ಲು ತೂರಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆ ಸಂಬಂಧ ಪೇದೆ ಜಗದೀಶ್ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Next Story