ಸಂಘಪರಿವಾರದ ಬಂಧುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಜ. 29: ‘ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್ ಅವರ ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವ ಅಮಾನವೀಯ ವರ್ತನೆ ಖಂಡನೀಯ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬುಧವಾರ ಟ್ವೀಟ್ ಮಾಡಿರುವ ಅವರು, ‘ಹಿಂದುಗಳೆಲ್ಲ ಒಂದು’ ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರಕಾರ ರಾಜ್ಯದಲ್ಲಿದೆಯೇ? ಎಂದು ಇದೇ ವೇಳೆ ಖಾರವಾಗಿ ಪ್ರಶ್ನಿಸಿದ್ದಾರೆ.
ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್ ಅವರ ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವ ಅಮಾನವೀಯ ವರ್ತನೆ ಖಂಡನೀಯ.
— Siddaramaiah (@siddaramaiah) January 29, 2020
'ಹಿಂದುಗಳೆಲ್ಲ ಒಂದು'ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರ್ಕಾರ ರಾಜ್ಯದಲ್ಲಿದೆಯೇ? pic.twitter.com/SaJHuf8WJb
Next Story