ಏಕಾಏಕಿ ಟಿಕೆಟ್ ರದ್ದು ಮಾಡಿದ ಆರೋಪ: ಕಾಶ್ಮೀರಿ ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು, ಮಾ.24: ಕಾಶ್ಮೀರಕ್ಕೆ ಹೋಗಲು ಟಿಕೆಟ್ ಕಾಯ್ದಿರಿಸಿದ್ದೆವು. ಆದರೆ, ಏಕಾಏಕಿ ರದ್ದುಗೊಳಿಸಲಾಗಿದೆ ಎಂದು ಆರೋಪಿಸಿ ಕಾಶ್ಮೀರಿ ವಿದ್ಯಾರ್ಥಿಗಳು ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.
ಮುಂಗಡವಾಗಿ ಟಿಕೆಟ್ ಕಾಯ್ದಿರಿಸಲಾಗಿತ್ತು. ವಿಮಾನ ರದ್ದುಗೊಳಿಸಿದ ಬಗ್ಗೆ ಯಾವುದೇ ಬದಲಿ ಕ್ರಮ ಕೈಗೊಂಡಿಲ್ಲ ಮತ್ತು ಮಾಹಿತಿಯನ್ನು ನೀಡಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ದೂರಿದರು. ಕಾಯ್ದಿರಿಸಿದ್ದ ಟಿಕೆಟ್ ಏಕಾಏಕಿ ರದ್ದು ಮಾಡಲಾಗಿದೆ. ನಾವು ಈಗ ಎಲ್ಲಿಗೆ ಹೋಗಬೇಕು ಎಂದು ವಿದ್ಯಾರ್ಥಿಗಳು ನಿಲ್ದಾಣದ ಅಧಿಕಾರಿಗಳನ್ನು ಪ್ರಶ್ನಿಸಿದರು. ವಿಮಾನ ಹಾರಾಟ ಬಂದ್ ಮಾಡಿ ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಕೊರೋನ ಹರಡುವಿಕೆಯ ಹಿನ್ನೆಲೆಯಲ್ಲಿ ಅಂತರ್ರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
Next Story