ಕಲಬುರಗಿ: ನಿಷೇಧಾಜ್ಞೆಯ ಮಧ್ಯೆಯೂ ತೆರೆದಿರುವ ಎಪಿಎಂಸಿ: ಸಾಮಾಜಿಕ ಅಂತರ ನಿರ್ಲಕ್ಷಿಸಿ ಸೇರಿರುವ ಜನರು
ಕಲಬುರಗಿ, ಎ.1: ಕೊರೋನ ಸೋಂಕು ಹರಡುವುದನ್ನು ತಡೆಯಲು ವಿಶ್ವಾದ್ಯಂತ ಸಾಕಷ್ಟು ಪ್ರಯತ್ನ ನಡೆಯುತ್ತಿದ್ದು, ದೇಶದಲ್ಲಿ ಕೋವಿಡ್ -19 ತಡೆಗೆ ಕೇಂದ್ರ ಸರಕಾರ ಲಾಕ್ ಡೌನ್ ಘೋಷಿಸಿದ್ದರೆ, ಜಿಲ್ಲಾಡಳಿತ ಎ.14ರವರೆಗೆ ಕಲಂ 144 ಜಾರಿ ಮಾಡಿ ಆದೇಶ ಹೊರಡಿಸುವ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗಿದೆ.
ಆದರೆ ನಗರದ ಹೊರ ವಲಯದ ತಾಜ್ ಸುಲ್ತಾನಪುರ ಹತ್ತಿರ ವಿರುವ ಎಪಿಎಂಸಿ ಕೃಷಿ ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಜನಜಂಗುಳಿ ಸೇರಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರು ಭಾಗಿಯಾಗಿ ನಿಯಮ ಉಲ್ಲಂಘಿಸುವುದು ಕಂಡುಬಂತು.
ಇತ್ತೀಚಿಗೆ ಕೇಂದ್ರ ಬಸ್ ನಿಲ್ದಾಣದ ಹತ್ತಿರವಿರುವ ಕಣ್ಣಿ ತರಕಾರಿ ಮಾರ್ಕೆಟ್ ಬಂದ್ ಮಾಡಿರುವುದು ಕೃಷಿ ಮಾರುಕಟ್ಟೆಯಲ್ಲಿ ಜನ ದಟ್ಟಣೆಗೆ ಕಾರಣ ಎಂದು ಹೇಳಲಾಗುತ್ತಿದೆ.
Next Story