ಕೊರೋನ ಸೋಂಕಿತ ವೃದ್ಧ ಸಾವು: ರಾಜ್ಯದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
ಬಾಗಲಕೋಟೆ, ಎ.3: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಬಾಗಲಕೋಟೆಯ ವ್ಯಕ್ತಿಯೊಬ್ಬರು ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯ ಮಾರುಕಟ್ಟೆ ಪ್ರದೇಶದಲ್ಲಿ ಖಾದ್ಯ ತೈಲ ಚಿಲ್ಲರೆ ಮಾರಾಟ ಅಂಗಡಿ ಇಟ್ಟುಕೊಂಡಿದ್ದ 75 ವರ್ಷದ ವೃದ್ಧ ಮೃತ ವ್ಯಕ್ತಿಯಾಗಿದ್ದು, ಇವರನ್ನು ಕೊರೋನ ಸೋಂಕಿನ ಕಾರಣ ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಕೊರೋನ ಸೋಂಕಿನ ಲಕ್ಷಣ ಕಂಡು ಬಂದಿದ್ದ ಹಿನ್ನೆಲೆ ಅವರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ಸೋಂಕು ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Next Story