ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತ್ಯು
ರಾಜ್ಯದಲ್ಲಿ ನಡೆದ ಘಟನೆ
ಬೆಳಗಾವಿ, ಎ.4: ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಮಕ್ಕಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇಂದು ಮದ್ಯಾಹ್ನ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಜ್ಜನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಭಾಗವ್ವ (6) ತಾಯಮ್ಮ (5) ಮಾಳಪ್ಪ (4) ಹಾಗೂ ರಾಜಶ್ರೀ (2) ಎಂದು ಗುರುತಿಸಲಾಗಿದೆ.
ತೋಟದ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ತಮ್ಮ ಕೈಯಲ್ಲಿದ್ದ ಮೊಬೈಲ್ ಕೃಷಿ ಹೊಂಡಕ್ಕೆ ಬಿದ್ದಿದ್ದು, ಈ ವೇಳೆ ಮೊಬೈಲ್ ತೆಗೆಯಲು ಹೊಂಡಕ್ಕೆ ಇಳಿದ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story