ದಿಲ್ಲಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ 801 ಜನರನ್ನು ಗುರುತಿಸಲಾಗಿದೆ: ಸರಕಾರದಿಂದ ಹೈಕೋರ್ಟ್ಗೆ ಮಾಹಿತಿ
ಬೆಂಗಳೂರು, ಎ.9: ಹೊಸದಿಲ್ಲಿಯಲ್ಲಿ ನಡೆದ ನಿಝಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 801 ಜನರು ಗುರುತಿಸಲಾಗಿದ್ದು, ಇವರನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ನಿಝಾಮುದ್ದೀನ್ ಸಭೆಯಲ್ಲಿ ಭಾಗಿಯಾಗಿದ್ದ 801 ಜನರಲ್ಲಿ 581 ಜನರು ಬೇರೆ ರಾಜ್ಯದವರಾಗಿದ್ದು, ಇವರ ಬಗ್ಗೆ ಈಗಾಗಲೇ ಅಲ್ಲಿಯ ರಾಜ್ಯ ಸರಕಾರಗಳಿಗೆ ಮಾಹಿತಿ ನೀಡಲಾಗಿದೆ. 801 ಜನರನ್ನು ಒಳಗೊಂಡಂತೆ 50 ಜನರು ವಿದೇಶಿಯರೂ ಸೇರಿಕೊಂಡಿದ್ದು, ಅವರನ್ನೂ ಬೀದರ್, ಬೆಳಗಾವಿ, ತುಮಕೂರು ಸೇರಿ ಇತರೆ ಜಿಲ್ಲೆಗಳಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ಸರಕಾರಿ ಪರ ವಕೀಲರು ಪೀಠಕ್ಕೆ ತಿಳಿಸಿದರು.
226 ಜನರನ್ನು ಬೆಂಗಳೂರು ನಗರದಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ. 482 ಜನರನ್ನು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ.
ರಾಜ್ಯದ ಜಿಲ್ಲೆಗಳ ಎಸ್ಪಿ ಹಾಗೂ ಪೊಲೀಸ್ ಕಮೀಷನರ್ ಅವರಿಗೆ ಸ್ಥಳೀಯ ಮಟ್ಟದಲ್ಲಿ ಸಭೆ ನಡೆಸಿ ನಿಝಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಮಾಹಿತಿ ಕಲೆ ಹಾಕಿದೆ ಎಂದು ಸರಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು.