ಚಿಕ್ಕಮಗಳೂರು: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ
ಚಿಕ್ಕಮಗಳೂರು, ಮೇ.22: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಪ್ಪ ತಾಲೂಕಿನ ಸಿಗದಾಳುವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬಾಬಣ್ಣ (55), ಅವರ ಮಗಳು ಶೈಲಾ (32), ಮೊಮ್ಮಗಳು ಅನನ್ಯ (11) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಭುವನ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉತ್ತಮೇಶ್ವರ ಬಡಾವಣೆ ನಿವಾಸಿಗಳಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿಷ ಸೇವನೆಯಿಂದ ತೀವ್ರ ಅಸ್ವಸ್ಥರಾಗಿರುವ ಇವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story