ಮೇ 28ರಂದು ರೆಡ್ಕ್ರಾಸ್ ಶತಮಾನೋತ್ಸವ ದಿನಾಚರಣೆ
ಉಡುಪಿ, ಮೇ 26: ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆ ಮೇ 28ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡಿನ ರೆಡ್ಕ್ರಾಸ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ, ರಾಜ್ಯ ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಭಾಗವಹಿಸಲಿದ್ದಾರೆ.
ರೆಡ್ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಸರ್ ಜೀನ್ ಹೆನ್ರಿ ಡ್ಯುನಾಂಟ್ ಅವರ ನೂತನ ಪ್ರತಿಮೆಯ ಅನಾವರಣ, ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಗುರುತಿಸಲ್ಪಟ್ಟ ವಿಕಲಚೇತನ ಫಲಾನುಭವಿಗಳಿಗೆ ಕೃತಕ ಕಾಲುಗಳು, ಕ್ಯಾಲಿಫರ್, ಗಾಲಿಕುರ್ಚಿ, ತ್ರಿಚಕ್ರ ವಾಹನ ಮತ್ತು ಎಂಆರ್ ಕಿಟ್ಗಳ ವಿತರಣೆ, ಆಯ್ದ ಕೊರಗ ಕುಟುಂಬದ 350 ಫಲಾನುಭವಿಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ಮತ್ತು ಔಷಧಿ ವಿತರಣೆ ಮತ್ತು ಕೋವಿಡ್-19 ನಿಯಂತ್ರಣ ಹಾಗೂ ತಪಾಸಣಾ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ನಿರಂತರವಾಗಿ ಭಾಗವಹಿಸಿರುವ ಎಲ್ಲಾ ಕಾರ್ಯಕರ್ತರು, ವೈದ್ಯರು, ದಾದಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಮತ್ತು ಕೋವಿಡ್ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾ ರೆಡ್ಕ್ರಾಸ್ನ ಪ್ರಕಟಣೆ ತಿಳಿಸಿದೆ.