ಶಾಲೆಗಳ ಆರಂಭದ ನಿರ್ಧರಿತ ದಿನಾಂಕ ಪ್ರಕಟವಾಗಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಬಾಗಲಕೋಟೆ, ಜೂ.3: ಶಾಲೆಗಳನ್ನು ಪ್ರಾರಂಭಿಸುವ ಕುರಿತು ಇನ್ನೂ ನಿರ್ಧರಿತ ದಿನಾಂಕ ಪ್ರಕಟವಾಗಿಲ್ಲ. ಹೀಗಾಗಿ ಪೋಷಕರು ಆತಂಕ ಪಡುವ ಅಗತ್ಯವಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳ ಪ್ರಾರಂಭಿಸುವ ದಿನಾಂಕದ ಕುರಿತು ಪೋಷಕರು ಹಾಗೂ ಎಸ್ಡಿಎಂಸಿ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಇವರೆಲ್ಲರ ಮಾಹಿತಿಯನ್ನು ಕ್ರೋಡೀಕರಿಸಿ ಜೂ.15ಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ನಂತರ ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ ಕೈಗೊಳ್ಳಲಾಗುವುದೆಂದು ಮಾಹಿತಿ ನೀಡಿದ್ದಾರೆ.
Next Story