ಸಫಾಯಿ ಕರ್ಮಚಾರಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಜೂ.20: 2019-20ನೇ ಸಾಲಿನ ಸ್ವಯಂ ಉದ್ಯೋಗ , ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳವರು ನಿಗಮದ ವೆಬ್ಸೈಟ್ -www.ksskdc.kar.nic.in- ಗೆ ಆನ್ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ-576104 ಇಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story