ಮುಖ್ಯಮಂತ್ರಿ ಬಿಎಸ್ವೈ ಕುಟುಂಬದ ಹೆಸರಿನಲ್ಲಿ ವಂಚನೆ: ಬಂಧನ
ಬೆಂಗಳೂರು, ಜು.2: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದ ಸದಸ್ಯ ಎಂದು ನಂಬಿಸಿ, ಸರಕಾರಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಹಾವೇರಿ ಮೂಲದ ಶಿವಕುಮಾರ್ ಹೊಸಳ್ಳಿ ಬಂಧಿತ ಆರೋಪಿ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಯುವಕರನ್ನು ಸಂಪರ್ಕಿಸುತ್ತಿದ್ದ ಆರೋಪಿ ಶಿವಕುಮಾರ್, ನನಗೆ ಮುಖ್ಯಮಂತ್ರಿ ಹಾಗೂ ಅವರ ಕುಟುಂಬಸ್ಥರು ಆತ್ಮೀಯರು. ಹೀಗಾಗಿ ವಿವಿಧ ಇಲಾಖೆಗಳಲ್ಲಿ ಕೆಲಸ ಖಾಲಿ ಇರುವ ಸರಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ. ಈ ಸಂಬಂಧ ದೂರುಗಳು ಕೇಳಿಬಂದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Next Story