ಕೊರೋನ ವೈರಸ್ ಗೆ ಮತ್ತೆ 21 ಮಂದಿ ಬಲಿ: ಒಂದೇ ದಿನ 1,694 ಮಂದಿಗೆ ಸೋಂಕು ದೃಢ
ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆ
ಬೆಂಗಳೂರು, ಜು.3: ಕರ್ನಾಟಕದಲ್ಲಿ ಕೊರೋನ ವೈರಸ್ ತೀವ್ರಗತಿಯಲ್ಲಿ ಏರುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ದೈನಂದಿನ ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.
ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆವರೆಗೆ ಮತ್ತೆ 1,694 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 19,710 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5, ವಿಜಯಪುರ 2, ಕಲಬುರಗಿ 3, ಚಿಕ್ಕಬಳ್ಳಾಪುರ 3, ಶಿವಮೊಗ್ಗ 2, ಬಳ್ಳಾರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 293ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 994, ಬಳ್ಳಾರಿ 97, ದಕ್ಷಿಣ ಕನ್ನಡ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ 16, ಕೊಡಗು 16, ಯಾದಗಿರಿ 14, ಹಾಸನ 13, ಬೆಳಗಾವಿ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ಉತ್ತರ ಕನ್ನಡ ಮತ್ತು ದಾವಣಗೆರೆ ತಲಾ 5, ವಿಜಯಪುರ ಮತ್ತು ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 3, ಹಾವೇರಿಯಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 19,710 ಕೊರೋನ ಸೋಂಕಿತರ ಪೈಕಿ 8,805 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 471 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 293 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 10,608 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.