ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ: ದುಷ್ಕರ್ಮಿಗಳ ಗಡಿಪಾರಿಗೆ ಒತ್ತಾಯಿಸಿ ಡಿಎಸ್ಎಸ್ ಧರಣಿ
ಕಲಬುರ್ಗಿ, ಜು.9: ಮುಂಬೈನ ದಾದರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹದ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಈ ಕೂಡಲೇ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಡಿಎಸ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಕೇಂದ್ರ ಹಾಗೂ ಮಹಾರಾಷ್ಟ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಪ್ರತಿಮೆಗೆ ಅವಮಾನ ಮಾಡುತ್ತಿದ್ದರು. ಇದೀಗ ಅಂಬೇಡ್ಕರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸರಕಾರ ಸುಮ್ಮನೆ ಕೈಕಟ್ಟಿ ಕುಳಿತಿರುವುದು ನಾಚಿಕೆಗೇಡಿನ ಸಂಗತಿ, ಕೂಡಲೇ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ಗಡಿಪಾರು ಮಾಡಬೇಕು ಹಾಗೂ ಮಹಾರಾಷ್ಟ್ರದ ಗೃಹ ಸಚಿವರು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
Next Story